ಬ್ರೇಕಿಂಗ್ ನ್ಯೂಸ್
ಖಾಲಿ ಖಾಲಿ ನಿಖಿಲ್ ಖಾಲಿ, ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ.

ಖಾಲಿ ಖಾಲಿ ನಿಖಿಲ್ ಖಾಲಿ, ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ.

 ನ್ಯೂಸ್‌ ಬ್ರೋ ಡೆಸ್ಕ್  November 23, 2024, 11:00 am
ಖಾಲಿ ಖಾಲಿ ನಿಖಿಲ್ ಖಾಲಿ, ಕಾಂಗ್ರೆಸ್ ಕಾರ್ಯಕರ್ತರ ಘೋಷಣೆ.

 ಚನ್ನಪಟ್ಟಣ : ರಾಜ್ಯದಲ್ಲಿ ಇಂದು ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರ ಬೀಳಲಿದ್ದು, ಈ ಮೂರು ವಿಧಾನ ಸಭಾ ಕ್ಷೇತ್ರಗಳಲ್ಲಿ ಪೈಕಿ ಬಹು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಭಾರಿ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಈ ವೇಳೆ ಖಾಲಿ ಖಾಲಿ ನಿಖಿಲ್ ಖಾಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 9 ನೇ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ 18 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣ ನಗರ ವ್ಯಾಪ್ತಿಯಲ್ಲಿ ಮತದಾರರು ಸಿ.ಪಿ ಯೋಗೇಶ್ವರ್ ಕೈ ಹಿಡಿದಿದ್ದಾರೆ ಎನ್ನಲಾಗಿದೆ. ಕೊನೆಯ ಹಂತದ ವರೆಗೂ ಇದೇ ಮುನ್ನಡೆಯನ್ನು ಯೋಗೇಶ್ವರ್ ಸಾಧಿಸುತ್ತಾರೋ ಎನ್ನುವುದು ಕಾದು ನೋಡಬೇಕಿದೆ.

ಈ ಕ್ಷಣದ ಸುದ್ದಿ